ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟ್ಯಂತರ ರೂಪಾಯಿ ವಂಚನೆ ಆರೋಪ: ದಂಪತಿ ಆತ್ಮಹತ್ಯೆ

Last Updated 17 ಅಕ್ಟೋಬರ್ 2017, 5:00 IST
ಅಕ್ಷರ ಗಾತ್ರ

ತುಮಕೂರು: ಚೀಟಿ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದ ದಂಪತಿ ಕೊರಟಗೆರೆ ಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ(47), ಪ್ರಭಾವತಿ(43)  ಆತ್ಮಹತ್ಯೆ ಮಾಡಿಕೊಂಡವರು.

ರವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಭಾವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಬೆಸ್ಕಾಂ ನೌಕರರಾಗಿದ್ದರು. ಚೀಟಿ ವ್ಯವಹಾರದಲ್ಲಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ಬಳಿಕ ಅಮಾನತುಗೊಂಡಿದ್ದರು. ತುಮಕೂರು, ದೊಡ್ಡಬಳ್ಳಾಪುರ, ಬೆಂಗಳೂರು ಸೇರಿ ವಿವಿಧ ಜಿಲ್ಲೆಯಲ್ಲಿ ಇವರು ಚೀಟಿ ವ್ಯವಹಾರ ನಡೆಸಿದ್ದರು. ಈ ವ್ಯವಹಾರದಲ್ಲಿ ವಂಚನೆ ಮಾಡಿದ್ದಾರೆ ಎಂದು ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಚೆಗೆ , ಜಾಮೀನಿನ ಮೇಲೆ ಹೊರ ಬಂದಿದ್ದರು. ದಂಪತಿಗೆ ಮಕ್ಕಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT