ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿದಿರೆ: ಹಲವರು ಬಿಜೆಪಿ ಸೇರ್ಪಡೆ

Last Updated 17 ಅಕ್ಟೋಬರ್ 2017, 6:18 IST
ಅಕ್ಷರ ಗಾತ್ರ

ಬಿದಿರೆ (ಬಾಳೆಹೊನ್ನೂರು): ಇಲ್ಲಿನ ಗ್ರಾಮ ಪಂಚಾಯಿತಿ ಬಳಿಯ ಸಮುದಾಯ ಭವನದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 48 ಕಾರ್ಯಕರ್ತರು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಡಿ.ಎನ್.ಜೀವರಾಜ್ ಮಾತನಾಡಿ, ‘ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಗಮನಿಸಿ ಮತದಾರರು ಕಾಂಗ್ರೆಸ್, ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಭಾಗ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಹಣ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ’ ಎಂದರು.

ಬಿದಿರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವದಾಸ್, ಬಿ.ಪ್ರಭಾಕರ್, ಶಶಿಧರ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಗೊಂಡರು. ನರಸಿಂಹರಾಜಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷ ವೆನಿಲ್ಲಾ ಭಾಸ್ಕರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಲಿಂಗರಾಜು,ಉದಯಕುಮಾರ್ ಹೆಗ್ಡೆ, ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ರವಿ, ಮುದರ ಪೂಜಾರಿ ಅದ್ದಡ ಸತೀಶ್, ಹೊಸೂರು ದಿನೇಶ್, ಚಂದ್ರಶೇಖರ್‌, ಗ್ರಾಮ ಪಂಚಾಯಿತಿ ಸದಸ್ಯ ರಘು ಹಾಗೂ ಖಾಂಡ್ಯ ಹೋಬಳಿಯ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT