ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲದು: ಸೀತಾರಾಮ್ ಯೆಚೂರಿ

Last Updated 17 ಅಕ್ಟೋಬರ್ 2017, 11:06 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೇರಳದಲ್ಲಿ ಹಿಂಸೆಯನ್ನು ಹರಡುತ್ತಿದ್ದು, ಈ ಕೃತ್ಯವನ್ನೇ ಮುಂದುವರಿಸಿದಲ್ಲಿ ಬಿಜೆಪಿಯು ರಾಜ್ಯದಲ್ಲಿ ಒಂದು ಸ್ಥಾನವನ್ನೂ ಗೆಲ್ಲದು ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ಕೇರಳದಲ್ಲಿ ಬಿಜೆಪಿಯು ಕಳೆದ ಎರಡು ವಾರಗಳಿಂದ ನಡೆಸಿದ್ದ ‘ಜನ ರಕ್ಷಾ ಯಾತ್ರೆ’ಗೆ ಪ್ರತಿಯಾಗಿ ಇಲ್ಲಿ ಬಿಜೆಪಿ ಪ್ರಧಾನ ಕಚೇರಿ ವರೆಗೆ ಸಿಪಿಐ(ಎಂ) ನಡೆಸಿದ ಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಬಿಜೆಪಿಯು ಕೇರಳದಲ್ಲಿ ಹಿಂಸೆ ಹೆಚ್ಚಿಸಿದರೆ ರಾಜ್ಯದಲ್ಲಿ ಒಬ್ಬನೇ ಒಬ್ಬ ಶಾಸಕನನ್ನು ಹೊಂದುವುದೂ ಅದಕ್ಕೆ ಸಾಧ್ಯವಾಗದು. ಬಿಜೆಪಿಯು ಹಿಂಸೆ ಮತ್ತು ಬೆದರಿಕೆಯ ಮೂಲಕ ರಾಜ್ಯದಲ್ಲಿ ರಾಜಕೀಯ ಅಸ್ತಿತ್ವ ಹೆಚ್ಚಿಸಿಕೊಳ್ಳಲು ಹವಣಿಸುತ್ತಿದೆ’ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT