ಬೆಟ್ಟದ ಕಾಲು ಭಾಗ ಏರಿದ್ದ ವಿದ್ಯಾರ್ಥಿಗಳೆಲ್ಲ ಅಲ್ಲಿ ನೀರಾಟದಲ್ಲಿ ಮಗ್ನರಾಗಿದ್ದರು. ಈ ವೇಳೆ ನವೀನ್ ಕಾಲು ಜಾರಿ ಬೆಟ್ಟದ ಮೇಲೆ ಇರುವ ನೀರಿನ ಗುಂಡಿಯೊಂದಕ್ಕೆ ಬಿದ್ದು ಅರೆಪ್ರಜ್ಞಾವಸ್ಥೆ ಸ್ಥಿತಿಗೆ ಜಾರಿದ್ದಾನೆ. ಕೂಡಲೇ ಆತನನ್ನು ರಕ್ಷಿಸಿದ ಗೆಳೆಯರು ಆಂಬುಲೆನ್ಸ್ನಲ್ಲಿ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಆತ ಮೃತಪಟ್ಟಿದ್ದಾನೆ’ ಎಂದು ನಂದಿಗಿರಿಧಾಮ ಠಾಣೆ ಪೊಲೀಸರು ತಿಳಿಸಿದರು.