‘ಹೊರತೆಗೆಯಲಾದ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಐದು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದೆ. ಧಾರವಾಡ, ನವಲಗುಂದ ಭಾಗದಿಂದ ಹಳ್ಳದ ಪ್ರವಾಹದಲ್ಲಿ ಶವ ತೇಲಿಕೊಂಡು ಬಂದಿರಬಹುದು. ಆದರೆ, ಈ ಭಾಗದಲ್ಲಿ ಕಳೆದೊಂದು ವಾರದಲ್ಲಿ ಯಾವುದೇ ನಾಪತ್ತೆ ಪ್ರಕರಣ ದಾಖಲಾಗಿಲ್ಲ. ತನಿಖೆ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷಬಾಬು ಪ್ರಜಾವಾಣಿಗೆ ತಿಳಿಸಿದರು.