‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಕಾಣಿಸಿಕೊಳ್ಳಲಿಲ್ಲ. ಒಂದು ಮೂಲದ ಪ್ರಕಾರ, ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುವ ಮಾರ್ಗ ಮಧ್ಯೆಯೇ, ವೇಣುಗೋಪಾಲ್ ಅವರನ್ನು ಸೌಭಾಗ್ಯ ಬಸವರಾಜನ್ ಭೇಟಿಯಾಗಿ, ಅಧಕ್ಷರಾಗಿ ಮುಂದುವರಿಯಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.