ಎಐಐಎಯನ್ನು ಮಂಗಳವಾರ ಉದ್ಘಾಟಿಸಿದ್ದ ಮೋದಿ ಅವರು, ಪರೋಕ್ಷವಾಗಿ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ‘ತನ್ನ ಇತಿಹಾಸ ಮತ್ತು ಪರಂಪರೆಯನ್ನು ಗೌರವಿಸದಿದ್ದರೆ ಯಾವುದೇ ದೇಶವೂ ಮುಂದುವರಿಯಲು ಸಾಧ್ಯವಿಲ್ಲ. ಬ್ರಿಟಿಷರ ಕಾಲದಲ್ಲಿ ಆಯುರ್ವೇದವನ್ನು ಕಡೆಗಣಿಸಲಾಗಿತ್ತು. ಸ್ವಾತಂತ್ರ್ಯ ಬಂದ ನಂತರವೂ ಆಯುರ್ವೇದವನ್ನು ಕಡೆಗಣಿಸಲಾಯಿತು. ಆದರೆ ನಾವು ಅದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಸಾರ್ವಜನಿಕ ಆರೋಗ್ಯ ಸೇವೆಯ ಜತೆಗೆ ಆಯುರ್ವೇದವನ್ನು ವಿಲೀನ ಮಾಡುತ್ತೇವೆ’ ಎಂದು ಹೇಳಿದ್ದರು.