ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ನಡೆಸಿದರೆ ರಾಮನಿಂದ ಶಿಕ್ಷೆ ಖಂಡಿತ: ಲಾಲು ಪ್ರಸಾದ್

Last Updated 19 ಅಕ್ಟೋಬರ್ 2017, 16:37 IST
ಅಕ್ಷರ ಗಾತ್ರ

ಪಟ್ನಾ: ‘ಬಿಜೆಪಿ ಪಕ್ಷ ರಾಮನ ಹೆಸರನ್ನು ರಾಜಕೀಯ ದಾಳವಾಗಿ ಬಳಸಿಕೊಂಡರೆ ರಾಮ ನೀಡುವ ಶಿಕ್ಷಗೆ ಗುರಿಯಾಗಬೇಕಾಗುತ್ತದೆ’ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹೇಳಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಲಾಲೂ ಪ್ರಸಾದ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಆದಿತ್ಯನಾಥ್ ಅಯೋಧ್ಯೆಯಲ್ಲಿ ನಡೆಸಿದ ದೀಪಾವಳಿ ಕಾರ್ಯಕ್ರಮವನ್ನು ಲಾಲೂ ಖಂಡಿಸಿದ್ದಾರೆ.

‘ಬಿಜೆಪಿಯವರು ರಾಮನ ಹೆಸರಿನಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಧರ್ಮ ಹಾಗೂ ಪ್ರಾರ್ಥನೆ ವಿಚಾರದಲ್ಲಿ ವೈಯಕ್ತಿಕ ಸ್ವಾತಂತ್ರ್ಯವಿದೆ. ಆದರೆ ಬಿಜೆಪಿಯವರು ಅದರಲ್ಲೂ ಮುಖ್ಯವಾಗಿ ಆದಿತ್ಯನಾಥ್ ಅವರು ರಾಜಕೀಯ ಆಟವಾಡುತ್ತಿದ್ದಾರೆ. ರಾಮನ ಹೆಸರಿನಲ್ಲಿ ರಾಜಕೀಯ ಆಟವಾಡುತ್ತಿರುವ ಆದಿತ್ಯನಾಥ್ ಅವರ ನಡವಳಿಕೆಯನ್ನು ಜನರು ಅರಿತುಕೊಳ್ಳಬೇಕು. ರಾಜಕೀಯದಲ್ಲಿ ಬೆಳೆಯುವ ಸಲುವಾಗಿ ರಾಮನ ಹೆಸರನ್ನು ಬಳಸಿಕೊಂಡಿದ್ದಲ್ಲಿ ರಾಮನ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ’ ಎಂದಿದ್ದಾರೆ.

‘ಕೇಂದ್ರ ಸರ್ಕಾರ ನೋಟು ರದ್ಧತಿ ಜಾರಿಗೆ ತಂದಿದ್ದರಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ ಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯ ಹೃದಯದಲ್ಲೂ ರಾಮ ನೆಲೆಸಿದ್ದಾನೆ. ಹೀಗಾಗಿ ಜನರನ್ನು ನೋಯಿಸುವುದರಿಂದ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ರಾಮ ನಾಶಪಡಿಸುತ್ತಾನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT