ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಹೆಸರು ಕೇಳಿಬಂದಿದೆ. ಹೀಗಾಗಿ, ತನಿಖಾಧಿಕಾರಿ ಮಲ್ಲೇಶ್ವರ ಎಸಿಪಿ ಆನಂದ್ ಬಡಿಗೇರ್ ಅವರು, ಕೆಲ ದಿನಗಳ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಅದಕ್ಕೆ ವಕೀಲರ ಮೂಲಕ ಉತ್ತರಿಸಿದ್ದ ಯಡಿಯೂರಪ್ಪ, ‘ನಾನು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಆದರೆ, ಕಾನೂನಿನ ಪ್ರಕಾರ ಮನೆಗೆ ಬಂದು ಹೇಳಿಕೆ ಪಡೆಯುವುದಾದರೆ ನಾನು ಮಾಹಿತಿ ನೀಡುತ್ತೇನೆ’ ಎಂದು ಸ್ಪಷ್ಟಪಡಿಸಿದ್ದರು.