ಚಾಮರಾಜನಗರ: ಭರ್ತಿಯಾಗಿರುವ ಸುವರ್ಣಾವತಿ ಜಲಾಶಯಕ್ಕೆ ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಜಿಲ್ಲಾ ಘಟಕ ಹಾಗೂ ಯುವ ಘಟಕದಿಂದ ಬಾಗಿನ ಅರ್ಪಿಸಲಾಯಿತು.
ಬಳಿಕ ವೇದಿಕೆಯ ಜಿಲ್ಲಾ ಉಸ್ತುವಾರಿ ಪ್ರವೀಣ್ಕುಮಾರ್ ಮಾತನಾಡಿ, ತಾಲ್ಲೂಕಿನ ಜೀವನಾಡಿಯಾದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯಗಳು ಭರ್ತಿಗೊಂಡು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.
ಜಿಲ್ಲೆಯ ಜನರಿಗೆ ನೀರಾವರಿ ಭೂಮಿ ಕೊಡಿಸಲು ಕರವೇ ಸಿದ್ಧತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದರು. ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್.ಕೆ. ನವೀನ್ಕುಮಾರ್ ಮಾತನಾಡಿದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ ವಿ. ನಾಯಕ್, ಸಂಘಟನಾ ಕಾರ್ಯದರ್ಶಿ ಜಗದೀಶ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಚಂದ್ರ, ಕಾರ್ಯದರ್ಶಿ ಲೋಕೇಶ್, ಗುಂಡ್ಲುಪೇಟೆ ಟೌನ್ ಅಧ್ಯಕ್ಷ ರಮೇಶ್ನಾಯಕ್, ಟೌನ್ ಅಧ್ಯಕ್ಷ ಸುರೇಶ್ನಾಯಕ ಹಾಜರಿದ್ದರು.