ಕ್ಷೌರ ವೃತ್ತಿ ನಡೆಸಿ ಸ್ವಾಭಿಮಾನದಿಂದ ಜೀವನ ಸಾಗಿಸುತ್ತಿರವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಚಿವರು ಉದ್ಧಟತನ ಮೆರೆದಿದ್ದಾರೆ. ಅವರು ಬಹಿರಂಗವಾಗಿ ಕ್ಷೌರಿಕರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತ್ಯನಾರಾಯಣ್, ವಿಶ್ವನಾಥ್, ಹರೀಶ್, ಮಂಜುನಾಥ್, ಚೇತನ್ ಇದ್ದರು.