ದಾಳಿಂಬೆ ಕೃಷಿ ಮೂಲಕ ಕಾಯಕಯೋಗಿ ಎಂದು ನಾಡಿನಲ್ಲಿ ಗುರುತಿಸಿಕೊಂಡಿರುವ ಇಲ್ಲಿನ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಬಸವ ಭಕ್ತರಾಗಿರುವ ಶಾಂತವೀರ ಸ್ವಾಮೀಜಿ, ಬಯಲು ಸೀಮೆಯ ಈ ಬೆಟ್ಟದಲ್ಲಿ ವೆಂಕಟೇಶ್ವರಸ್ವಾಮಿ ದೇಗುಲ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿರುವುದು ಅಚ್ಚರಿಯನ್ನುಂಟು ಮಾಡುತ್ತಿದೆ ಎನ್ನುತ್ತಾರೆ ಪ್ರಸನ್ನಕುಮಾರ್, ಶಶಿಧರ್, ರಂಗನಾಥ್.
ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಗಿರಿ(ಬೆಟ್ಟ) ಪ್ರದೇಶದಲ್ಲಿ ತಿಮ್ಮಪ್ಪ ದೇವಸ್ಥಾನವಿಲ್ಲ. ಇಲ್ಲಿ ದೇಗುಲ ನಿರ್ಮಾಣ ಮಾಡುತ್ತಿರುವುದರಿಂದ ಈ ಭಾಗದ ಭಕ್ತರಿಗೆ ಅನುಕೂಲ ಆಗಲಿದೆ. ದೇಗುಲ ನಿರ್ಮಾಣದಿಂದ ತಾಲ್ಲೂಕಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಹಿರಿಮೆಗೆ ಮತ್ತೊಂದು ಗರಿ ಸಿಕ್ಕಂತಾಗುತ್ತದೆ. ಹೀಗಾಗಿ ಭಕ್ತರು ಹೆಚ್ಚಿನ ಸಹಕಾರ ನೀಡಬೇಕು ಎಂದು ಕುಂಚಾದ್ರಿ ವೆಂಕಟೇಶ್ವರ ದೇವಸ್ಥಾನದ ಚಾರಿಟಬಲ್ ಟ್ರಸ್ಟ್ನ ಗೌರವಾಧ್ಯಕ್ಷ ಆಗ್ರೋ ಶಿವಣ್ಣ ಮನವಿ ಮಾಡಿದ್ದಾರೆ.