ಹಾಸನ: ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಗುರುವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದು ದರ್ಶನ ಪಡೆದರು. ಈ ಬಾರಿ ಎಂಟು ದಿನ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಮಾತ್ರವಲ್ಲದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಜನಪ್ರತಿನಿಧಿಗಳು, ಕಲಾವಿದರು, ಕ್ರೀಡಾಪಟುಗಳು ಸಹ ದರ್ಶನ ಪಡೆದರು. ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಭೇಟಿ ನೀಡಿದ್ದರು. ಗಣ್ಯರು ನೇರ ದರ್ಶನದ ₹ 1000 ಟಿಕೆಟ್ ಪಡೆದು ಒಳ ಪ್ರವೇಶಿಸಿದರು.