ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಕೇಶ್ವಾಪುರ ಮತ್ತು ಸುತ್ತಮುತ್ತಲ ಬಡಾವಣೆಗಳಲ್ಲಿ ನೆಲೆಸಿದ್ದಾರೆ. ಇವರು ಕೇಶ್ವಾಪುರ ಮುಖ್ಯರಸ್ತೆಯಲ್ಲೇ ಸಂಚರಿಸುತ್ತಾರೆ. ಗಣ್ಯರು ಓಡಾಡುವ ರಸ್ತೆಯ ಸ್ಥಿತಿಯೇ ಈ ರೀತಿ ಇದೆ. ಇದು ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳ ಆಡಳಿತ ಕಾರ್ಯವೈಖರಿಗೆ ಕನ್ನಡಿ ಹಿಡಿದಂತಿದೆ ಎಂದು ದೂರುತ್ತಾರೆ ಸ್ಥಳೀಯರು.