ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ಭರವಸೆ

Last Updated 20 ಅಕ್ಟೋಬರ್ 2017, 7:25 IST
ಅಕ್ಷರ ಗಾತ್ರ

ಹೊನ್ನಾವರ: ತಾಲ್ಲೂಕಿನ ಕೆಳಗಿನೂರು ಹೊಳ್ಳಾಕುಳಿಯಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಭವನದ ಸ್ಥಳಕ್ಕೆ ಕೇಂದ್ರ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಇತ್ತೀಚೆಗೆ ಭೇಟಿ ನೀಡಿದರು.

ಒಕ್ಕಲಿಗರ ಸಂಘಟನೆ ವತಿಯಿಂದ ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಬಳಿಕ ಸಮುದಾಯ ಭವನಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಯಿತು. ಬಳಿಕ ಮಾತನಾಡಿದ ಅನಂತಕುಮಾರ ‘ಕೇಂದ್ರ ಸರ್ಕಾರದಿಂದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಎಚ್.ಗೌಡ, ಶಂಭು ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯ ಗಣಪಯ್ಯ ಗೌಡ, ಚಿತ್ತಾರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗಣಪತಿ ಗೌಡ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ, ಬಿಜೆಪಿ ಮುಖಂಡ ಉಮೇಶ ನಾಯ್ಕ, ಸುನೀಲ್ ನಾಯ್ಕ, ವಿನೋದ ನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT