ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಬಸವರಾಜೇಗೌಡ ಮಾತನಾಡಿ, ‘ಸ್ಥಳೀಯ ಜನಪ್ರತಿನಿಧಿಗಳು, ವ್ಯಾಪಾರಿಗಳು ಹಾಗೂ ಸಂಘ, ಸಂಸ್ಥೆಗಳ ಮುಖ್ಯಸ್ಥರು ರಥೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ’ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷ ಪಿ. ರಾಜು, ಸದಸ್ಯ ವಿಜಯಕುಮಾರ್, ಎಇಇ ವಾಸುದೇವ್ ಇತರರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.