ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ಪೊಲೀಸರ ಅಮಾನತು

ಆರೋಪಿ ಅಲೆದಾಡಲು ಬಿಟ್ಟ ಆರೋಪ
Last Updated 20 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಎಐಎಡಿಎಂಕೆ ಚಿಹ್ನೆಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಲಂಚ ನೀಡಿಕೆ ಪ್ರಕರಣದ ಮಧ್ಯವರ್ತಿ ಸುಖೇಶ್ ಚಂದ್ರಶೇಖರ್‌ನನ್ನು ಕೋರ್ಟ್ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದ ವೇಳೆ ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಟ್ಟ ಆರೋಪದ ಮೇಲೆ ಏಳು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಲಂಚ ನೀಡಲು ಎಐಎಡಿಎಂಕೆ (ಅಮ್ಮಾ) ಪಕ್ಷದ ಮುಖಂಡ ಟಿಟಿವಿ ದಿನಕರನ್ ಅವರಿಂದ ಹಣ ಪಡೆದ ಆರೋಪದಲ್ಲಿ ಏಪ್ರಿಲ್ 16ರಂದು ಚಂದ್ರಶೇಖರ್ ಬಂಧನವಾಗಿತ್ತು.

ಅಕ್ಟೋಬರ್ 9ರಿಂದ 16ರ ಅವಧಿಯಲ್ಲಿ ದೆಹಲಿ ಪೊಲೀಸರು ಚಂದ್ರಶೇಖರ್‌ನನ್ನು ಕೋರ್ಟ್ ವಿಚಾರಣೆಗಾಗಿ ಮುಂಬೈ, ಬೆಂಗಳೂರು ಹಾಗೂ ಕೊಯಮತ್ತೂರುಗಳಿಗೆ ಭದ್ರತೆಯಲ್ಲಿ ಕರೆದೊಯ್ದಿದ್ದರು.

ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರಿಗೆ ಆದಾಯ ತೆರಿಗೆ ಇಲಾಖೆ ಸಲ್ಲಿಸಿರುವ ವರದಿ ಪ್ರಕಾರ, ‘ಬೆಂಗಳೂರಿಗೆ ಕರೆದೊಯ್ದ ವೇಳೆ ಆರೋಪಿಯು ಮುಕ್ತವಾಗಿ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟಿದ್ದರು. ಅಲ್ಲದೆ ಆತನಿಗೆ ತನ್ನ ವ್ಯವಹಾರಗಳನ್ನು ನಡೆಸಲೂ ಅವಕಾಶ ನೀಡಿದ್ದರು’ ಎಂದು ಉಲ್ಲೇಖಿಸಲಾಗಿದೆ.

ವರದಿ ಆಧರಿಸಿ ಗುರುವಾರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಮುಗಿಯುವ ತನಕ ಮೂರನೇ ಬೆಟಾಲಿಯನ್‌ನ ಏಳು ಪೊಲೀಸ್ ಸಿಬ್ಬಂದಿಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಆಯುಕ್ತರ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT