‘ಸ್ಥಳೀಯರು ನಡೆಸುತ್ತಿರುವ ಹೋರಾಟ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ಮತ್ತು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಗಮನಕ್ಕೆ ಬಂದಿದೆ. ಟಿಕೆಟ್ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಒಂದು ವೇಳೆ ಪಕ್ಷ ಕರುಣಾಕರ ರೆಡ್ಡಿ ಅವರಿಗೆ ಟಿಕೆಟ್ ಕೊಟ್ಟಲ್ಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಟಿಕೆಟ್ ಆಕಾಂಕ್ಷಿಗಳಾದ ಎನ್.ಕೊಟ್ರೇಶ್, ಜಿ.ನಂಜನಗೌಡ, ಮಹಾಬಲೇಶ್ವರ ಗೌಡ ಅವರಲ್ಲಿ ಯಾರಿಗಾದರೂ ಟಿಕೆಟ್ ನೀಡಿದಲ್ಲಿ ಅವರನ್ನೂ ಬೆಂಬಲಿಸುತ್ತೇನೆ’ ಎಂದರು.