ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೈಕ್‌ಗಳಿಗೆ ಕಾರಿನಿಂದ ಗುದ್ದಿ ಪುಂಡಾಟಿಕೆ

ಬನಶಂಕರಿಯ ನಾಗೇಂದ್ರ ಬ್ಲಾಕ್‌ನಲ್ಲಿ ನಡೆದ ಪ್ರಕರಣ
Last Updated 20 ಅಕ್ಟೋಬರ್ 2017, 20:13 IST
ಅಕ್ಷರ ಗಾತ್ರ

ಬೆಂಗಳೂರು: ಬನಶಂಕರಿಯ ನಾಗೇಂದ್ರ ಬ್ಲಾಕ್‌ನ 11ನೇ ಮುಖ್ಯರಸ್ತೆಯಲ್ಲಿ ಅ.14 ರಂದು ಮಧ್ಯಾಹ್ನ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿ ಪುಂಡಾಟಿಕೆ ನಡೆಸಿದ್ದಾರೆ.

ಕೆಂಪು ಬಣ್ಣದ ಕಾರಿನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು ರಸ್ತೆ ನಿಲ್ಲಿಸಿದ್ದ ಸ್ಕೂಟರ್‌ಗೆ ಗುದ್ದಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬೈಕ್ ಸಹ ಕೆಳಗೆ ಬಿದ್ದಿದೆ. ಸುಮಾರು 50 ಅಡಿಯಷ್ಟು ದೂರ ಸ್ಕೂಟರ್ ಅನ್ನು ಕಾರಿನಿಂದಲೇ ತಳ್ಳಿಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಅದರ ಸಂಪೂರ್ಣ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಪುಂಡಾಟಿಕೆಯನ್ನು ಪ್ರಶ್ನಿಸಿದ್ದಕ್ಕೆ ಅವರು ಧಮ್ಕಿ ಹಾಕಿದ್ದರು. ಹಾಡ ಹಗಲೇ ಈ ಕೃತ್ಯ ನಡೆದಿದ್ದರಿಂದ ಭಯಗೊಂಡಿದ್ದೇವೆ. ಗಿರಿನಗರ, ಹನುಮಂತ
ನಗರ, ಬಸವನಗುಡಿ ಹಾಗೂ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ಪದೇ ಪದೇ ನಡೆಯುತ್ತಿವೆ. ಕೆಲ ದಿನಗಳ ಹಿಂದಷ್ಟೇ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಾರುಗಳ ಗಾಜುಗಳನ್ನು ಒಡೆದಿದ್ದರು. ಆದರೆ, ಪೊಲೀಸರು ಇದುವರೆಗೂ ಕ್ರಮ
ಕೈಗೊಂಡಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ. ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದೇವೆ. ತ್ವರಿತ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಬನಶಂಕರಿ ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT