ಡಂಬಳ: ‘ಹೋಬಳಿ ವ್ಯಾಪ್ತಿಯಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ 100ಕ್ಕೂ ಹೆಚ್ಚು ಕುಟುಂಬಗಳು ಒಂದೇ ಕಡೆ ವಾಸಿಸುತ್ತಿದ್ದು, ಇವರಿಗೆ ಪ್ರತ್ಯೇಕವಾಗಿ ಆಶ್ರಯ ಮನೆ ನಿರ್ಮಿಸಿಕೊಳ್ಳಲು, ಸರ್ಕಾರದ ವತಿಯಿಂದ 6 ಎಕರೆ ಜಮೀನು ಖರೀದಿಸಿ ಕೊಡುವಂತೆ ಸಮುದಾಯ ಪ್ರತಿನಿಧಿಗಳು ಮಂಗಳವಾರ ಶಾಸಕ ಜಿ.ಎಸ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
‘ಜೀವನೋಪಾಯಕ್ಕಾಗಿ ಕೂಲಿ, ಗೌಂಡಿ ಕೆಲಸವನ್ನು ಅಲಂಬಿಸಿದ್ದೇವೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸದ್ಯ ವಾಸವಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ಸ್ಥಳದ ಕೊರತೆ ಇದೆ. ಹೀಗಾಗಿ, ಪ್ರತ್ಯೇಕವಾಗಿ ನಮ್ಮ ಸಮುದಾಯಕ್ಕೆ ಆಶ್ರಯ ಮನೆಗಳನ್ನು ಕಟ್ಟಿಕೊಡಬೇಕು ಎಂದು ಸಮುದಾಯದ ಮುಖಂಡ ಕೆ.ಎನ್. ದೊಡ್ಡಮನಿ ಮನವಿ ಮಾಡಿದರು.