ಬೆಳವಣಿಕಿ (ರೋಣ ತಾ.): ಗ್ರಾಮದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಹಾನಿ ಸಮೀಕ್ಷೆ ಕೈಗೊಂಡರು.
ಈರುಳ್ಳಿ, ಶೇಂಗಾ, ಗೋವಿನಜೋಳ ಸೇರಿ ವಿವಿಧ ಬೆಳೆಗಳ ಹಾನಿ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದರು.
‘ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ಲಾಟ್ಗಳಿವೆ. ದಿನಕ್ಕೆ 40ರಿಂದ 50 ಗದ್ದೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತದೆ. ಸರ್ಕಾರ ನಿಗದಿಪಡಿಸಿದ ಅವಧಿಯಲ್ಲಿ ಸಮೀಕ್ಷಾ ಕಾರ್ಯ ಮುಗಿಸಬೇಕಿದೆ’ ಎಂದು ಗ್ರಾಮ ಲೆಕ್ಕಾಧಿಕಾರಿ ಹೇಳಿದರು.
ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ಕಂದಾಯ ನಿರೀಕ್ಷಕ ಆರ್.ಸಿ.ಬಾರಕೇರ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರೈತ ಶರಣಬಸವೇಶ್ವರ ಕುಸುಗಲ್, ಶಿವರಡ್ಡಿ ಹಳ್ಳಿಕೇರಿ, ಬಸಲಿಂಗಪ್ಪ ಕುಸುಗಲ್, ಪುಟ್ಟು ಜಗಾಪುರ ಇದ್ದರು.