ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಂಬರ್‌ ರಸ್ತೆ ನಿರ್ಮಿಸಿ

Last Updated 21 ಅಕ್ಟೋಬರ್ 2017, 7:10 IST
ಅಕ್ಷರ ಗಾತ್ರ

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ಭೈರಾಮಡಗಿ ಮತ್ತು ಗೊಬ್ಬುರ(ಬಿ) ರಸ್ತೆಯು ಈಚೆಗೆ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಹಾಳಾಗಿದ್ದು, ಜನರು ಪರಾದಾಡುವಂತಾಗಿದೆ.

ಕಳೆದ ವರ್ಷ ಗ್ರಾಮದ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಕಳೆಪೆ ಕಾಮಗಾರಿ ಪರಿಣಾಮ ರಸ್ತೆ ತುಂಬಾ ತಗ್ಗುದಿಣ್ಣೆಗಳು ಬಿದ್ದಿವೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆಯಾಗಿದೆ.

ಬಸ್‌ಗಳು ಸರಿಯಾದ ಸಮಯಕ್ಕೆ ಬಾರದೆ ಸಂಚಾರ ವ್ಯತ್ಯಯವಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಿಸಿದ ಸಚಿವರು, ಕ್ಷೇತ್ರದ ಶಾಸಕರು ಇತ್ತ ಗಮನಹರಿಸಿ ಸೂಕ್ತ ರಸ್ತೆ ನಿರ್ಮಿಸಬೇಕು ಎಂದು ಮುಖಂಡ ಸುಧೀರ ಹೊಸಮನಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT