ಮುಳಬಾಗಿಲು: ತಾಲ್ಲೂಕಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಗ್ರಾಮೀಣ ಭಾಗದಲ್ಲಿ ಬಹುಪಾಲು ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರು ಬವಣೆ ಪಡುವಂತಾಗಿದೆ.
ಮಳೆಯಿಂದಾಗಿ ರಸ್ತೆಯಲ್ಲಿನ ಜಲ್ಲಿ, ಡಾಂಬರು ಕೊಚ್ಚಿ ಹೋಗಿದ್ದು, ದೊಡ್ಡ ಗುಂಡಿಗಳಾಗಿವೆ. ಇದರಿಂದ ವಾಹನ ಸವಾರರು ನಿಧಾನ ಗತಿಯಲ್ಲಿ ಸಾಗುವಂತಾಗಿದೆ. ರೈತರಿಗೆ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಸಮಸ್ಯೆಯಾಗಿದೆ.