ಬಿಸಿಲಿನಲ್ಲಿ ಬಳಲಿ ಬಂದವರಿಗೆ ತಂಪನ್ನೆರೆಯುತ್ತಿದೆ. ಮರ–ಗಿಡಗಳನ್ನು ಬೆಳೆಸುವಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕೊಡುಗೆ ಅಪಾರ. ಕಾಲೇಜಿನ ಪ್ರಾಂಶುಪಾಲ ಕೆ.ಕಾಳೇಗೌಡ, ಎನ್.ಎಸ್.ಎಸ್ ಅಧಿಕಾರಿ ಚಂದ್ರಶೇಖರ್ ಅವರ ದೂರದೃಷ್ಟಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಹಸೀರೀಕರಣ ಬರೀ ಮಾತಾಗಬಾರದು, ಕೃತಿಯಾಗಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಎಸ್.ಕೃಷ್ಣಮೂರ್ತಿ ಹೇಳುತ್ತಾರೆ.