ರಾಜೇಶ್ ಕರಾಂದ ಪಟ್ಟಣದಲ್ಲಿ ಸಣ್ಣ ಅಂಗಡಿಯನ್ನು ಹೊಂದಿದ್ದು, ಎಂದಿನಂತೆ ಸಹೋದರನೊಂದಿಗೆ ಅಂಗಡಿಗೆ ತೆರಳಿದ್ದರು. ಈ ವೇಳೆ ಬೈಕ್ನಲ್ಲಿ ಮುಖ ಮುಚ್ಚಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಕ್ಕದಲ್ಲಿದ ರಾಜೇಶ್ ಸಹೋದರ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್ ಈ ಪ್ರದೇಶದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದರು ಎನ್ನಲಾಗಿದೆ.