‘ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ವೈಶಿಷ್ಟ್ಯ. ಜಾತಿ, ಮತ, ಧರ್ಮಗಳ ಹೊರತಾಗಿಯೂ ಸಮಾನತೆಯಿಂದ ಬದುಕುವ ಅವಕಾಶ ಈ ದೇಶದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೀತಿಯ ಕೋಮು ಗಲಭೆಗಳಿಗೆ ಅವಕಾಶ ನೀಡಿಲ್ಲ. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ನಾಯಕರು ತಾವು ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಹೇಳುತ್ತಿದ್ದಾರೆ. ಇದರ ಹಿಂದೆ ಕೋಮು ಗಲಭೆ ಸೃಷ್ಟಿಸುವ ಹುನ್ನಾರವಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಆಪಾದಿಸಿದರು.