ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಸಂಘರ್ಷಕ್ಕೆ ಹುನ್ನಾರ; ಮುನಿಯಪ್ಪ

Last Updated 21 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕೋಲಾರ: ‘ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಕೋಮು ಸಂಘರ್ಷಕ್ಕೆ ಅವಕಾಶ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ’ ಎಂದು ಸಂಸದ ಕೆ.ಎಚ್.ಮುನಿಯಪ್ಪ ಶನಿವಾರ ಇಲ್ಲಿ ಟೀಕಿಸಿದರು.

‘ಭಾರತ ಜಾತ್ಯತೀತ ರಾಷ್ಟ್ರ. ರಾಷ್ಟ್ರದಲ್ಲಿನ ಎಲ್ಲ ಧರ್ಮಗಳನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವುದು ಸಮಂಜಸವಾಗಿದೆ’ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಗೌರವ ನೀಡುವುದಾಗಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ, ಸಂಸದ ಪ್ರಹ್ಲಾದ ಜೋಷಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿರೋಧಿಸುವುದಾದರೆ ಅದು ಸಂವಿಧಾನ ವಿರೋಧಿಸಿದಂತೆ. ಟಿಪ್ಪು ಸುಲ್ತಾನ್ ಜಯಂತಿ ಸಂವಿಧಾನಬದ್ಧವಾಗಿದೆ. ಇದನ್ನು ವಿರೋಧಿಸುವ ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT