‘ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ 15 ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ. ಎಲ್ಲ ವರ್ಗದ ಜನರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಲಹೆ, ಅಭಿಪ್ರಾಯ ನೀಡಲು ಅವಕಾಶ ಕಲ್ಪಿಸಲಾಗಿದೆ. ರೈತರಿಂದಲೂ ಉಪಯುಕ್ತ ಸಲಹೆಗಳು ಬಂದಿವೆ. ಸಾರ್ವಜನಿಕರು ಫೇಸ್ಬುಕ್, ಟ್ವಿಟರ್ ಮೂಲಕವೂ ಸಲಹೆ ನೀಡಬಹುದು. ಸಾರ್ವಜನಿಕರು, ವಿವಿಧ ಕ್ಷೇತ್ರಗಳ ತಜ್ಞರು ಹಾಗೂ ಸಂಘ–ಸಂಸ್ಥೆಗಳ ಅಭಿಪ್ರಾಯ ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಅವರು ತಿಳಿಸಿದರು.