ಹಗರಣಕ್ಕೆ ಸಂಬಂಧಿಸಿದಂತೆ ಹಿಂದೂಜಾ ಸೋದರರ ವಿರುದ್ಧದ ಎಫ್ಐಆರ್ ಅನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿತ್ತು. ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂಬ ಮನವಿಯನ್ನು 2005ರಲ್ಲಿ ಕೇಂದ್ರದ ಯುಪಿಎ ಸರ್ಕಾರ ತಿರಸ್ಕರಿಸಿ
ತ್ತು. ಮೇಲ್ಮನವಿಗೆ ಅನುಮತಿ ನಿರಾಕರಿಸಿದ ತನ್ನ ನಿರ್ಧಾರವನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಸಿಬಿಐ ಪತ್ರ ಬರೆದಿದೆ.