ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ದೇಗುಲದ ಆವರಣ ಹಾಗೂ ವಿವಿಧೆಡೆಯಿಂದ ಬಂದಿದ್ದ ವರ್ತಕರು ತಿಂಡಿ, ತಿನಿಸು, ಆಟಿಕೆ ಸಾಮಾನುಗಳ ಮಳಿಗೆಗಳನ್ನು ತೆರೆದಿದ್ದರು. ಮಾಂಬಳ್ಳಿ ಪೊಲೀಸ್ ಠಾಣೆಯ ವತಿಯಿಂದ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.