‘ಹಗಲು, ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ. ಅವರು ಇರುವುದರಿಂದಲೇ ಜನರು ಶಾಂತಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ’ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಹೆಚ್ಚುವರಿ ಎಸ್ಪಿ ಗೋಪಾಲ ಬ್ಯಾಕೋಡ, ‘ಅಕ್ಟೋಬರ್ 21, 1959ರಂದು ಚೀನಾ– ಭಾರತದ ಗಡಿಭಾಗ ಲಡಾಖ್ನಲ್ಲಿ ನಡೆದ ಹೋರಾಟದಲ್ಲಿ 10 ಮಂದಿ ಭಾರತೀಯ ಪೊಲೀಸರು ಮೃತಪಟ್ಟಿದ್ದರು. ಅವರನ್ನು ಸ್ಮರಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ’ ಎಂದು ಹೇಳಿದರು.