ಇಲ್ಲಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಶಿಷ್ಟಾಚಾರದ ಪ್ರಕಾರ ಆಯಾ ಭಾಗದ ಜನಪ್ರತಿನಿಧಿಗಳ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಇಷ್ಟವಿಲ್ಲದವರು ಕಾರ್ಯಕ್ರಮಕ್ಕೆ ಹೋಗದಿದ್ದರಾಯಿತು. ಅದು ಬಿಟ್ಟು ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಬೇಡಿ ಎಂದು ಹೇಳುವುದು ಎಷ್ಟು ಸರಿ' ಎಂದು ಟಿಪ್ಪು ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಬಾರದು ಎಂಬ ಬಿಜೆಪಿಯ ಕೆಲ ನಾಯಕರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.