ನವದೆಹಲಿ: ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರಾಷ್ಟ್ರೀಯ ತನಿಖಾ ದಳ ಈ ವಾರಾಂತ್ಯದೊಳಗೆ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಿದೆ ಎಂದು ತನಿಖಾಧಿಖಾರಿಗಳು ಹೇಳಿದ್ದಾರೆ.
ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸಿನ ನೆರವು ಹಾಗೂ ಅಕ್ರಮ ಹಣ ವರ್ಗಾವಣೆಯ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ದೋಷಾರೋಪ ಪಟ್ಟಿ ಸಿದ್ಧತೆಯ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದೂ ಅವರು ತಿಳಿಸಿದ್ದಾರೆ.
ಝಾಕೀರ್ ಅವರ ಭಾಷಣಗಳಿಂದ ಪ್ರೇರಿತರಾಗಿರುವುದಾಗಿ ಬಾಂಗ್ಲಾದೇಶದ ಭಯೋತ್ಪಾದಕರು ಹೇಳಿಕೆ ನೀಡಿದ ನಂತರ, ಝಾಕೀರ್ ಅವರು ಜುಲೈ 1, 2016 ರಂದು ಭಾರತದಿಂದ ತೆರಳಿದ್ದರು.