ಭಾನುವಾರ ಇಲ್ಲಿ ಮಾತನಾಡಿದ ಅವರು, ‘ಕೆಜೆಪಿ ಸ್ಥಾಪನೆ ಮಾಡಿದ್ದಾಗ ಬಿ.ಎಸ್.ಯಡಿಯೂರಪ್ಪ ಟೋಪಿ ಧರಿಸಿ, ಖಡ್ಗ ಹಿಡಿದು ಟಿಪ್ಪುವನ್ನು ಹಾಡಿ ಹೊಗಳಿದ್ದರು. ಆ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಕೂಡ ಇದ್ದರು. ಆದರೆ, ಮಡಿಕೇರಿ ಘಟನೆಯ ನಂತರ ಟಿಪ್ಪುವಿನ ಬಗ್ಗೆ ವಿರೋಧ ಮಾತುಗಳನ್ನಾಡುತ್ತಿದ್ದಾರೆ’ ಎಂದು ಅವರು ದೂರಿದರು.