ಚನ್ನಗಿರಿ (ದಾವಣಗೆರೆ ಜಿಲ್ಲೆ): ತಾಲ್ಲೂಕು ಎರೇಹಳ್ಳಿ ಗ್ರಾಮದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಹುಡುಕಲು ಹೋದ ವ್ಯಕ್ತಿಯು ಭಾನುವಾರ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಗಾದ್ರಪ್ಪ(48) ಮೃತ ವ್ಯಕ್ತಿ. ಅವರು ಎರೇಹಳ್ಳಿ ಗ್ರಾಮದವರು. ಮನೆಗೆ ಬರದೇ ಇದ್ದ ಹಸುವನ್ನು ಹುಡುಕಲು ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಜೋಳದಹಾಳ್ ಅರಣ್ಯ ಪ್ರದೇಶಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದೆ. ಕಾಲಿನಿಂದ ತುಳಿದು ಸಾಯಿಸಿದೆ. ಮಾವಿನಕಟ್ಟೆ ಅರಣ್ಯ ಇಲಾಖೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವ ಪರೀಕ್ಷೆ ನಡೆದ ಚನ್ನಗಿರಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ವಡ್ನಾಳ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ಕೊಟ್ಟರು. ಕುಟುಂಬದವರಿಗೆ ಸಾಂತ್ವನ ಹೇಳಿ ಪರಿಹಾರ ನೀಡುವ ಭರವಸೆಯನ್ನು ನೀಡಿದರು.