ಹೊಸಪೇಟೆ: ‘ಹಂಪಿ ಉತ್ಸವ’ದ ಅಂಗವಾಗಿ ತಾಲ್ಲೂಕಿನ ಕಮಲಾಪುರದಲ್ಲಿ ಹಮ್ಮಿಕೊಂಡಿರುವ ಗೋಡೆಬರಹ ಚಿತ್ರಕಲಾ ಉತ್ಸವ ಮತ್ತು ಸ್ವಚ್ಛತಾ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು
ಗೋಡೆ ಮೇಲೆ ಚಿತ್ರ ಬಿಡಿಸಿ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ರಾಮ್ ಪ್ರಸಾದ್ ಮನೋಹರ್ ಮಾತನಾಡಿ, ‘ಸ್ವಚ್ಛತೆ ಎಂಬುದು ಜನಾಂದೋಲನವಾಗಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ವಾರ ನಡೆಯಲಿರುವ ಈ ಉತ್ಸವದಲ್ಲಿ ಹೆಚ್ಚಿನ ಜನ ಭಾಗವಹಿಸಬೇಕು’ ಎಂದರು.
’ಇದರಲ್ಲಿ ಭಾಗವಹಿಸಿದ ನಾಲ್ವರನ್ನು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಾಗುವುದು. ಅದರಲ್ಲಿ ಮೊದಲು ಬಂದವರಿಗೆ ದ್ವಿಚಕ್ರ ವಾಹನ, ಇನ್ನುಳಿದವರಿಗೆ ಬೈಸಿಕಲ್ ವಿತರಿಸಲಾಗುವುದು’ ಎಂದು ಘೋಷಿಸಿದರು. ನಂತರ ಕಲಾವಿದರು, ವಿದ್ಯಾರ್ಥಿಗಳು ಗೋಡೆಗಳ ಮೇಲೆ ಚಿತ್ರ ಬಿಡಿಸಿದರು.