ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರಚಾರ್ಯರ 51ನೇ ಜನ್ಮದಿನ ಆಚರಣೆ

Last Updated 23 ಅಕ್ಟೋಬರ್ 2017, 5:31 IST
ಅಕ್ಷರ ಗಾತ್ರ

ಬೀದರ್: ಸ್ವಾಮಿ ನರೇಂದ್ರಚಾರ್ಯ ಮಹಾರಾಜ ಅವರ 51ನೇ ಜನ್ಮದಿನವನ್ನು ನಗರದ ಲಕ್ಷ್ಮಿಭಾಯಿ ಕಮಠಾಣೆ ಶಾಲೆಯಲ್ಲಿ ಭಾನುವಾರ ಆಚರಿಸಲಾಯಿತು.
ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು

‘ಅಜ್ಞಾನದಿಂದ ಜ್ಞಾನದ ಮಾರ್ಗ ತೋರಿಸುವವರೇ ನಿಜವಾದ ಗುರು. ಗುರು ಇಲ್ಲದೆ ಜೀವನ ಸಾಗದು, ಬದುಕು ಯಶಸ್ವಿಯಾಗಿ ನಡೆಸಬೇಕು ಅಂದರೆ ಗುರುವಿನ ಮಾರ್ಗದರ್ಶನ ಅಗತ್ಯವಿದೆ’ ಎಂದರು.

ಸತ್ಸಂಗ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪಕುಮಾರ ಪಾಂಚಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಭುರಾವ ಕಂಬಳಿವಾಲೆ ಕನ್ನಡ ಸೇವಾ ಪ್ರತಿಷ್ಠಾನದ ಅಧ್ಯಕ್ಷರ ನಾಗಶೆಟ್ಟೆ ಧರ್ಮಪುರ, ಪ್ರಮುಖರಾದ ಶಿವಕುಮಾರ ಭಾಲ್ಕೆ, ನೀಲಕಂಠ ಬಿರಾದಾರ, ಸೂರ್ಯಕಾಂತ ಧನೆ, ವೈಶಾಲಿ ದಿಲೀಪ ಕಮಠಾಣೆ, ವಿರೂಪಾಕ್ಷ ಗಾದಗಿ ಇದ್ದರು.

ಮಲ್ಲಿಕಾರ್ಜುನ ವಲೆಂಡೆ ಸ್ವಾಗತಿಸಿ, ನಿರೂಪಿಸಿದರು. ದತ್ತಾತ್ರಿ ಬಿರಾದಾರ ವಂದಿಸಿದರು. ಇದೇ ಸಂದರ್ಭದಲ್ಲಿ ವೃದ್ಧರಿಗೆ ಹೊದಿಕೆಗಳನ್ನು ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT