ಇದರಿಂದ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಹಬ್ಬಕ್ಕೆ ಜಿಲ್ಲಾಡಳಿತ ಅನುಮತಿ ನೀಡದಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಕೂಡ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಹೋರಿ ಹಬ್ಬದ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸೊರಬ ವೃತ್ತ ನಿರೀಕ್ಷಕ ಉಮಾಪತಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.