ತಾಲ್ಲೂಕಿನ ಭರಮಸಾಗರದಲ್ಲಿ ಕೀಟಬಾಧೆಯಿಂದ ನಾಶವಾಗಿರುವ ಜಮೀನುಗಳಿಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ' ಈ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಈ ವೇಳೆ ಇಲ್ಲಿನ ರೈತರ ಹೊಲಗಳಿಗೆ ಭೇಟಿ ನೀಡಿದೆ. ಈ ಭಾಗದಲ್ಲಿ ಮೆಕ್ಕೆಜೋಳಕ್ಕೆ ಕೀಟಬಾಧೆ ತಗುಲಿದೆ, ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ, ಎಕರೆಗೆ 20, 25 ಚೀಲ ಬೆಳೆಯುತ್ತಿದ್ದರು. ಆದ್ರೆ, ಈಗ ಏನು ಸಿಗದಂತಾಗಿದೆ ಎಂದರು.