ತಿರುನೆಲ್ವೇಲಿ: ಸಾಲಗಾರನ ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ದಂಪತಿ ತಾವೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಸೋಮವಾರ ನಡೆದಿದೆ.
‘ಎರಡು ಮತ್ತು ಐದು ವರ್ಷದ ಮಕ್ಕಳು ಸೇರಿದಂತೆ ನಾಲ್ವರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಸಾಲಗಾರನ ವಿರುದ್ಧ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ದಂಪತಿ ಪ್ರತಿಭಟಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.