ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ, ನಿರಂಜನ್ ಭಟ್ ಹಾಗೂ ಸಾಕ್ಷ್ಯ ನಾಶ ಪ್ರಕರಣದ ಆರೋಪಿಗಳಾದ ಶ್ರೀನಿವಾಸ ಭಟ್ ಮತ್ತು ರಾಘವೇಂದ್ರ ಅವರನ್ನು ನ್ಯಾಯಾಧೀಶ ವೆಂಕಟೇಶ್ ನಾಯ್ಕ್ ಅವರ ಎದುರು ಸೋಮವಾರ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಅವರ ಮೇಲಿನ ಆರೋಪಗಳನ್ನು ನಿಗದಿಪಡಿಸಿದಾಗ, ಆರೋಪಿಗಳು ಅದನ್ನು ನಿರಾಕರಿಸಿದರು.