ಸೋಮವಾರ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಲಬುರ್ಗಿಯಿಂದ ಮಹಾಗಾಂವದ ವರೆಗೆ ಮತ್ತು ಬೀದರ್ನಿಂದ ಹುಮನಾಬಾದ್ವರೆಗಿನ ಕಾಮಗಾರಿ ಆಗಲೇ ಪೂರ್ಣಗೊಂಡಿತ್ತು. ಮರಗುತ್ತಿ ಬಳಿಯ ಸುರಂಗ ಮಾರ್ಗದ ಕಾಮಗಾರಿ ಮಾತ್ರ ಬಾಕಿ ಉಳಿದಿತ್ತು. ಅದು ಆರು ತಿಂಗಳಲ್ಲಿ ಮಗಿಯಬೇಕಾದ ಕಾಮಗಾರಿ. ಆದರೆ, ಅದನ್ನು ಪೂರ್ಣಗೊಳಿಸಲು ಮೂರು ವರ್ಷಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ, ಕೇಂದ್ರ ಸರ್ಕಾರ ಈ ಯೋಜನೆಯನ್ನು ತಮ್ಮದು ಎಂಬಂತೆ ಬಿಂಬಿಸುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.