‘ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಅವರು ಟಿಪ್ಪು ವಿರುದ್ಧ ಇಷ್ಟು ಹೀನ ಮಟ್ಟದಲ್ಲಿ ಟೀಕಿಸುತ್ತಿದ್ದಾರೆ. ಈ ಕುರಿತು ಕಾನೂನು ಕ್ರಮ ಜರುಗಿಸಲು ವಕೀಲರೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ’ ಎಂದು ಬಕ್ತಿಯಾರ್ ಅಲಿ ತಿಳಿಸಿದ್ದಾರೆ.