ಬಳ್ಳಾರಿ: ‘ಕಿತ್ತೂರು ಎಂಬ ಪುಟ್ಟರಾಜ್ಯದ ಸ್ವಾತಂತ್ರ್ಯ ರಕ್ಷಣೆಯ ಸಲುವಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಅಮರಳಾದ ಚೆನ್ನಮ್ಮ ಎಲ್ಲ ಮಹಿಳೆಯರಿಗೂ ಮಾದರಿ’ ಎಂದು ಉಪವಿಭಾಗಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜೋಳದರಾಶಿ ದೊಡ್ಡನಗೌಡ ಮಂದಿರದಲ್ಲಿ ಸೋಮವಾರ ಚೆನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಉತ್ತರ ಭಾರತದಲ್ಲಿ ಝಾನ್ಸಿ ಲಕ್ಷ್ಮೀಬಾಯಿಯಂತೆ, ದಕ್ಷಿಣ ಭಾರತದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆಯಾಗಿ ಗಮನ ಸೆಳೆದಿದ್ದಾರೆ’ ಎಂದರು.
ಮೇಯರ್ ಜಿ. ವೆಂಕಟರಮಣ, ಪಾಲಿಕೆ ಸದಸ್ಯ ಬಿ.ಬಸವರಾಜ ಮಾತನಾಡಿದರು. ಕೆ.ಬಿ. ಸಿದ್ದಲಿಂಗಪ್ಪ ವಿಶೇಷ ಉಪನ್ಯಾಸನ ನೀಡಿದರು. ಉಪಮೇಯರ್ ಜಿ.ಉಮಾದೇವಿ, ಪಾಲಿಕೆ ಸದ್ಯಸರಾದ ಶಾಷವಲಿ , ಕನ್ನಡ –ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಉಪಸ್ಥಿತರಿದ್ದರು.ಸ