ಗಜೇಂದ್ರಗಡ: ‘ಇಲ್ಲಿನ ಹಳೇ ಪ್ರವಾಸಿ ಮಂದಿರದಲ್ಲಿ ಸಾರಿಗೆ ಇಲಾಖೆಯ ಕಚೇರಿಯನ್ನು ತೆರೆಯಲು ಸರ್ಕಾರ ಸಮ್ಮತಿಸಿದರೆ, ನಮ್ಮ ಅಭ್ಯಂತರವೇನೂ ಇಲ್ಲ’ ಎಂದು ಗದಗ ಜಿಲ್ಲಾ ರಸ್ತೆ ಸಾರಿಗೆ ತನಿಖಾಧಿಕಾರಿ ಎಸ್. ನಾಗರಾಜ ಹೇಳಿದರು. ಹಳೇ ಪ್ರವಾಸಿಮಂದಿರದಲ್ಲಿ ನಡೆದ ವಾಹನ ತಪಾಸಣೆ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದರು.