ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ದುರುದ್ದೇಶದಿಂದ ನೀರು ಕೊಡುತ್ತಿಲ್ಲ’

Last Updated 24 ಅಕ್ಟೋಬರ್ 2017, 6:36 IST
ಅಕ್ಷರ ಗಾತ್ರ

ನರಗುಂದ: ‘ಮಹದಾಯಿಗೆ ಯಾವ ಸರ್ಕಾರವೂ ಸ್ಪಂದಿಸುತ್ತಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಹೆಚ್ಚಾಗಿದೆ. ಪಕ್ಷಗಳು ಪ್ರತಿಷ್ಠೆಗೆ ಜೋತು ಬೀಳುತ್ತಿವೆ. ರಾಜಕೀಯ ದುರುದ್ದೇಶದಿಂದ ಮಹದಾಯಿ ನೀರು ಬರುತ್ತಿಲ್ಲ’ ಎಂದು ಹೋರಾಟ ಸಮಿತಿ ಸದಸ್ಯ ರಾಮಚಂದ್ರ ಸಾಬಳೆ ಆರೋಪಿಸಿದರು.

ಪಟ್ಟಣದಲ್ಲಿ ನಡೆದ ಮಹದಾಯಿ ಧರಣಿಯ 831ನೇ ದಿನವಾದ ಸೋಮವಾರ ಅವರು ಮಾತನಾಡಿದರು. ‘ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ಬಲಿ ಪಡೆಯುತ್ತಿವೆ. ಈ ಭಾಗದ ಜನಪ್ರತಿನಿಧಿಗಳಿಗೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಬೇಕು, ಇದಕ್ಕಾಗಿ ಮಹದಾಯಿ ಹೋರಾಟದ ಜತೆಗೆ ಕೈಜೋಡಿಸಿರುವ ಎಲ್ಲ ಸಂಘಟನೆಗಳು ಮುಂದಾಗಬೇಕು’ ಎಂದರು.

ಮಹದಾಯಿ ಹೋರಾಟ ಸಮಿತಿ ಉಪಾಧ್ಯಕ್ಷ ಪರಶುರಾಮ ಜಂಬಗಿ ಮಾತನಾಡಿದರು. ‘ರೈತರು ಎಚ್ಚೆತ್ತುಕೊಂಡಿದ್ದಾರೆ. ಅದರ ಪರಿಣಾಮ ಎದುರಿಸಲು ರಾಜಕಾರಣಿಗಳು ಸಿದ್ದರಾಗಬೇಕು. ಪ್ರತಿ ಹಂತದಲ್ಲೂ ರೈತರಿಗೆ ಅನ್ಯಾಯ ಆಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಚಂದ್ರಗೌಡ ಪಾಟೀಲ, ವಾಸು ಚವ್ಹಾಣ, ಚನ್ನಪ್ಪಗೌಡ ಪಾಟೀಲ, ವೀರಣ್ಣ ಸೊಪ್ಪಿನ, ಕೆ.ಎಚ್‌.ಮೊರಬದ, ಎಸ್‌.ಕೆ.ಗಿರಿಯಣ್ಣವರ ಹನಮಂತ ಪಡೆಸೂರ, ಯಲ್ಲಪ್ಪ ಗುಡದೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT