6,40,925 ಎಕರೆಗೆ ನೀರಾವರಿ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ನೀರಾವರಿಯಲ್ಲಿ ಉತ್ತಮ ಕೆಲಸ ಮಾಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿ ಬಜೆಟ್ನಲ್ಲಿ ರಾಜಸ್ವ ಹೆಚ್ಚುವರಿ ಆಗುವಂತೆ ಮಾಡಿದ್ದಾರೆ. ಆರ್ಥಿಕ ಶಿಸ್ತನ್ನು ಸಿಎಂ ಸಿದ್ದರಾಮಯ್ಯ ಅವರು ಕಾಪಾಡಿದ್ದಾರೆ. ತೆರಿಗೆ ವಸೂಲಿಯಲ್ಲೂ ರಾಜ್ಯ ಉತ್ತಮ ಸಾಧನೆ ಮಾಡಿದೆ ಎಂದು ವೀರಪ್ಪ ಮೊಯಿಲಿ ಅವರು ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡರು.