ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌; ಸಿಎಂ, ರಾಜ್ಯಪಾಲರಿಂದ ಸ್ವಾಗತ

Last Updated 24 ಅಕ್ಟೋಬರ್ 2017, 11:46 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಿದರು.

ಮಧ್ಯಾಹ್ನ ಎಚ್‌ಎಎಲ್‌ ವಿಮಾನನಿಲ್ದಾಣಕ್ಕೆ ಬಂದಿಳಿದ ರಾಮನಾಥ ಕೋವಿಂದ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಸ್ವಾಗತಿಸಿದರು.

ವಿಮಾನ ನಿಲ್ದಾಣದಲ್ಲಿ ರಾಮನಾಥ್ ಕೋವಿಂದ್‌ ಅವರಿಗೆ ಪೇಟ ತೊಡಿಸಿ, ಶಾಲು ಹೊದಿಸಿ, ಹೂಗುಚ್ಚ ನೀಡುವ ಮೂಲಕ ಸಿಎಂ ಹಾಗೂ ರಾಜ್ಯಪಾಲರು ಆತ್ಮೀಯ ಸ್ವಾಗತ ಕೋರಿದರು.

ಬೆಂಗಳೂರಿಗೆ ಬಂದಿಳಿದಿರುವ ರಾಮನಾಥ ಕೋವಿಂದ್‌ ಅವರು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT