ಮಂಗಳೂರು: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ದಮನ ಮಾಡುವ ಕೆಲಸನಡೆಯುತ್ತಿದೆ. ಇದರಿಂದ ಭಾರತ ಅಪಾಯದಲ್ಲಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಹೇಳಿದರು.
ನಗರದ ಸೇಂಟ್ ಅಲೋಶಿಯಸ್ ಶಿಕ್ಷಣ ಕಾಲೇಜಿನ ಹತ್ತನೇ ವರ್ಷದ ಕಾಲೇಜು ದಿನಾಚರಣೆಯಲ್ಲಿ ಮಂಗಳವಾರ ಅವರು ಮಾತನಾಡಿದರು.
'ಅಸಮಾನತೆ, ಅನ್ಯಾಯಗಳನ್ನು ಪ್ರಶ್ನಿಸುವವರನ್ನು ಹತ್ತಿಕ್ಕಲಾಗುತ್ತಿದೆ. ಇತಿಹಾಸವನ್ನು ತಿರುಚುವ ಕೆಲಸಕ್ಕೆ ಅಧಿಕೃತ ಮಾನ್ಯತೆ ದೊರೆಯುತ್ತಿದೆ' ಎಂದರು.