ಭಾಲ್ಕಿ: ತಾಲ್ಲೂಕಿನ ತರನಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 7.30ರ ಸುಮಾರಿಗೆ ಸುಮಾರು 6 ರಿಂದ 7 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದೆ. ಗೋಡೆಗಳು ಅಲುಗಾಡಿದ್ದರಿಂದ ಆತಂಕಗೊಂಡ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.
ನೆಲ ಕಂಪಿಸಿದ ಪರಿಣಾಮ ಮನೆಯ ಅಟ್ಟಣಿಗೆಯಲ್ಲಿಟ್ಟಿದ್ದ ಕೆಲ ಸಾಮಾನುಗಳು ಕೆಳಗೆ ಬಿದ್ದಿವೆ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ ಚಳಕಾಪೂರೆ ಹೇಳಿದರು.
ಗ್ರಾಮಕ್ಕೆ ತಹಶೀಲ್ದಾರ್ ಮನೋಹರ ಸ್ವಾಮಿ, ಡಿವೈಎಸ್ಪಿ ವಿ.ಎಸ್.ಪಾಟೀಲ, ಪಿಎಸ್ಐ ವಿಜಯಕುಮಾರ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.